50 ಒಗಟುಗಳು ಮತ್ತು ಉತ್ತರಗಳು, Ogatugalu Mattu Uttara in Kannada, Ogatugalu Definition in Kannada, Puzzles and Answers in Kannada
50 ಒಗಟುಗಳು ಮತ್ತು ಉತ್ತರಗಳು:

ಈ ಲೇಖನಿಯಲ್ಲಿ ಸ್ನೇಹಿತರೇ ಒಗಟುಗಳನ್ನು ಮತ್ತು ಅದಕ್ಕೆ ಉತ್ತರವನ್ನು ನೀಡಿದ್ದೇವೆ. ನಿಮಗೆ ಅನುಕೂಲವಾಗುವಂತೆ ವಿಷಯವನ್ನು ಒದಗಿಸಿದ್ದೇವೆ.
೧. ಕಾಸಿನ ಕುದುರೆಗೆ ಬಾಲದ ಲಗಾಮು-ಸೂಜಿದಾರ
೨. ಬೆಳ್ಳಿ ಸಮುದ್ರದಲ್ಲಿ ಕಪ್ಪು ಸೂರ್ಯ-ಕಣ್ಣು
೩. ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ- ಬಾಳೆಹಣ್ಣು
೪. ಅಕ್ಕನ ಮೇಲೆ ಛತ್ರಿ- ರೆಪ್ಪೆ
೫. ಒಂದು ಮಡಕೆ, ಮಡಕೆಯೊಳಗೆ, ಕುಡಿಕೆ, ಕುಡಿಕೆಯಲ್ಲಿ ಸಾಗರ-ತೆಂಗಿನ ಕಾಯಿ
೬. ನಾನು ಚಿಕ್ಕವನಿದ್ದಾಗ ಎತ್ತರವಿದ್ದೇನೆ ಮತ್ತು ವಯಸ್ಸಾದಾಗ ನಾನು ಕುಳ್ಳಗಿದ್ದೇನೆ. ನಾನು ಏನು-ಮೇಣದಬತ್ತಿ
೭. ಅಡ್ಡಗೋಡೆ ಮೇಲೆ ದೀಪ-ಒಲೆ
೮. ಅಟ್ಟದ ಮೇಲೆ ಪುಟ್ಟ ಲಕ್ಷ್ಮಿ ಕುಳಿತವಳೆ-ಕುಂಕುಮ
೯. ಅಜ್ಜಿ ಅವಳ ಮೈತುಂಬಾ ಕಜ್ಜಿ-ಹಾಗಲಕಾಯಿ
೧೦. ಅಕ್ಕ ತಂಗೀರ ಮನೆಗೆ ಒಂದೇ ಗೂಡು-ಮೂಗು
೧೧. ಅಣ್ಣ ಅಣ್ಣ ಕೆಂಪು ಬಣ್ಣ ತಂದು ಕೊಡಣ್ಣ ಬೀಜವಿಲ್ಲದ ಹಣ್ಣ-ಗೆಣಸು
೧೨. ಅಣ್ಣಯ್ಯನ ಕುದುರೆಗೆ ಮೈ ಎಲ್ಲ ಗಾಯ-ಜರಡಿ
೧೩. ಒಂದು ಗುಂಡೀಲಿ ಒಂದೇ ಏತ-ನಾಲಿಗೆ
೧೪. ಒಂದು ಸುಣ್ಣದ ಗೋಡೆಗೆ ಒಂದೂ ಬಾಗಿಲಿಲ್ಲ-ಕೋಳಿಮೊಟ್ಟೆ
೧೫. ಒಳ್ಳೆ ಕೋಳಿ ಮುಳ್ಳಲಿ ಮೊಟ್ಟೆ ಇಟ್ಟಿದೆ-ನಿಂಬೆಹಣ್ಣು
೧೬. ಎರಡು ಕೆರೆಗೆ ಒಂದೇ ಏರಿ-ಮೂಗಿನ ಹೊಳ್ಳೆ
೧೭. ಉದ್ದಾನೆಯ ಮರಕ್ಕೆ ನೆರಳಿಲ್ಲ-ದಾರಿ
೧೮. ಊರೆಲ್ಲಾ ಅಲೆಯೋದು, ಬಾಗಿಲ ಸಂದೇಲಿ ಕೂರೋದು-ಪಾದರಕ್ಷೆ
೧೯. ಇಷ್ಟೊಪ್ಪ ಚಿನ್ನ, ಮನೆಯೆಲ್ಲಾ ರನ್ನ-ಬೆಂಕಿಕಡ್ಡಿ
೨೦. ಅಮ್ಮನ ಆಕಾಶವಾಣಿ ನಾನು-ಮಗು
೨೧. ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ- ಬಾಳೆಹಣ್ಣು
೨೨. ಅಂಗಡಿಯಿಂದ ತರೋದು ಮುಂದಿಟ್ಟುಕೊಂಡು ಅಳೋದು-ಈರುಳ್ಳಿ
೨೩. ಗೂಡ್ನಲ್ಲಿರೋ ಜೋಡಿ ಪಕ್ಷಿ ಊರೆಲ್ಲ ನೋಡುತ್ತೆ-ಕಣ್ಣು
೨೪. ಉದ್ದ ಮರದಲ್ಲಿ ಕೆಂಪು ಸಂನ್ಯಾಸಿ-ಅಡಿಕೆಕಾಯಿ
೨೫. ಕುದುರೆ ಬಾಲದಿಂದ ನೀರು ಕುಡಿಯುತ್ತದೆ-ಹೇನು
೨೬. ಮನೆ ಮೇಲೆ ಮಲ್ಲಿಗೆ ಹೂವು-ಮಂಜು
೨೭. ಸುದ್ದಿ ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ-ಪೋಸ್ಟ್ ಕಾರ್ಡ್
೨೮. ಬರೋದ ಕಂಡು ಕೈ ಒಡ್ತಾರೆ-ಬಸ್
೨೯. ಬಿಳಿ ಕುದುರೆಗೆ ಹಸಿರು ಬಾಲ-ಮೂಲಂಗಿ
೩೦. ಹಾರಿದರೆ ಹನುಮಂತ ಕೂಗಿದರೆ ಶಂಖ-ಕಪ್ಪೆ
೩೧. ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು-ಸೀತ ಫಲ
೩೨. ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.-ತಿಗಣೆ
೩೩. ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.-ಕುಂಕುಮ
೩೪. ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು-ಸುಣ್ಣ
೩೫. ಕುದುರೆ ಬಾಲದಿಂದ ನೀರು ಕುಡಿಯುತ್ತದೆ-ಹೇನು
೩೬. ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ-ಕಣ್ಣು
೩೭. ಗುಂಡಾಕಾರ ಮೈಯೆಲ್ಲಾ ತೂತು-ದೋಸೆ
೩೮. ಬಿಳಿ ಹುಲ್ಲಲ್ಲಿ ಕೆಂಪು ಕುರಿಮರಿ-ನಾಲಿಗೆ
೩೯. ಅನ್ನ ಮಾಡಲಿಕ್ಕೆ ಬಾರದಂತಹ ಅಕ್ಕಿ ಯಾವುದು-ಏಲಕ್ಕಿ
೪೦. ಬೆಳ್ಳಿ ಬಟ್ಟಲಲ್ಲಿ ಮುತ್ತಿನ ಬಿಂದು-ತಾರೆ
೪೧. ಹಸಿರು ಕೋಲಿಗೆ ಮುತ್ತಿನ ತುರಾಯಿ-ಜೋಳದ ತೆನೆ
೪೨. ಸೂಜಿ ಸಣ್ಣಕಾಗೆ ಬಣ್ಣ –ಕೂದಲು
೪೪. ಲಟಪಟ ಲೇಡಿಗೆ ಒಂದೇ ಕಣ್ಣು-ಸೂಜಿ
೪೫. ಬಂಗಾರದ ಗುಬ್ಬಿ ಬಾಲದಲ್ಲೇ ನೀರನ್ನು ಕುಡಿಯುತ್ತೆ-ಚಿಮಿಣಿ
೪೬. ಹೋದರು ಇರುತ್ತೆ ಬಂದರೂ ಕಾಡುತ್ತೆ.ಇದು ಏನು?-ನೆನಪು
೪೭. ಒಂದು ಮರ , ಮರದಾಗ ಅಲ್ಲ, ಅಲ್ಲಿನಾಗ ಕೊಬ್ರಿ ಗುಂಡ-ಆಕಾಶ ನಕ್ಷತ್ರ ಚಂದ್ರ
೪೩. ಹೋಗೋದು ಮುಳುಗೋದು ತರೋದು ಏನು?-ಬಿಂದಿಗೆ
೪೪. ತಲೆ ಇಲ್ಲ , ನಡು ಇಲ್ಲ , ಕೈಗಳಿದ್ದರು ಬೆರಳಿಲ್ಲ-ಕೋಟು ಅಂಗಿ
೪೫. ಕಿರೀಟ ಇದೆ ರಾಜ ಅಲ್ಲ, ಕಲ ತಿಳಿಸುತ್ತ್ತೆ ಗಡಿಯಾರವಲ್ಲ-ಕೋಳಿ
೪೬. ಒಂದು ಹಣ್ಣಿಗೆ ಹನ್ನೆರಡು ತೊಳೆ ಮತ್ತೂ ಮೂವತ್ತು ಬೀಜ-ವರ್ಷ
೪೮. ತಿಂಡಿಗೆ ಕಡಿಮೆ ಇಲ್ಲ ,ತೀರ್ಥ ಕುಡಿದರೆ ಸಾವು –ವಿಷ
೪೯. ಒಬ್ಬಳು ಮುಲುಗಿದಳು, ಒಬ್ಬಳು ಕರಗಿದಳು , ಒಬ್ಬಳು ತೇಲಿದಳು –ಅಡಿಕೆ , ಸುಣ್ಣ
೫೦. ಕಣ್ಣಿಗೆ ಕಾಣೋದಿಲ್ಲ, ಕೈಗೆ ಸಿಗೋದಿಲ್ಲ –ಗಾಳಿ
೫೧. ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ-ಬೆಕ್ಕು
೫೨. ಕಣ್ಣಿಗೆ ಹತ್ತಿರ ಕಾಲಿಗೆ ದೂರ-ಬೆಟ್ಟ
೫೩. ಕೂಗಿದರೆ ರಾವಣ, ಹಾರಿದರೆ ಹನುಮಂತ, ಕೂತರೆ ಮುನಿ-ಕಪ್ಪೆ
೫೪. ಒಂದು ಬತ್ತಿ ಮನೆಯೆಲ್ಲ ಬೆಳಕು-ಸೂರ್ಯ
೫೫. ಕರಿ ಹೊಲದ ಮದ್ಯದಲ್ಲಿ ಬೇಲಿ ದಾರಿ-ಬೈತಲೆ
೫೬. ಊಟಕ್ಕೆ ಮೊದಲು ನಾನು ಅಂತ ಬರುತ್ತೆ –ಬಾಳೆ ಎಲೆ , ತಟ್ಟೆ
೫೮. ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ-ಮಾವು
೫೯. ಕಲ್ಲು ತುಳಿಯುತ್ತೆ, ಮುಳ್ಳು ಮೆಯುತ್ತೆ, ನೀರು ಕಂಡ್ರೆ ನಿಲ್ಲುತ್ತೆ-ಚಪ್ಪಲಿ
೬೦. ಕಾಲಿಲ್ಲದೇ ನಡೆಯುವುದು, ತಲೆ ಎಲ್ಲಡೆ ನುಡಿಯುವುದು, ಮೇಲು ಕೆಳಗಾಗಿ ಓದುವುದು-ನದಿ
೬೧. ಜಂಬು ನೇರಳೆ ಮರ, ಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ-ಮೇಡು
೬೨. ಕಲ್ಲಲ್ಲಿ ಹುಟ್ಟುವುದು, ಕಲ್ಲಲ್ಲಿ ಬೆಳೆಯುವುದು, ನೆತ್ತಿಯಲ್ಲಿ ಕುತಗುಟ್ಟುವುದು-ಸುಣ್ಣ
೬೩. ಕಾಂತಾಮಣಿ ಎಂಬ ಪಕ್ಷಿ, ಚಿಂತಾಮಣಿ ಎಂಬ ಕೆರೆ, ಕೆರೆಯಲ್ಲಿ ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ-ದೀಪ
೬೪. . ಮನೆ ಮೇಲೆ ಮಲ್ಲಿಗೆ ಹೂವು.-ಮಂಜು
೬೫. ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ-ಕಣ್ಣು
೬೬. ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು-ಬೆಳ್ಳುಳ್ಳಿ
೬೭. ಬರೋದ ಕಂಡು ಕೈ ಒಡ್ತಾರೆ-ಬಸ್
೬೮. ಚಿಕ್ಕಕ್ಕನಿಗೆ ಪುಕ್ಕುದ್ದ-ಸೌಟು
೬೯. ಹೋದ ನೆಂಟ, ಬಂದ ದಾರಿ ಗೊತ್ತಿಲ್ಲ-ನೆರಳು
೭೦.ಎರಡು ಮನೆಗೆ ಒಂದೇ ದೂಲ-ಮೂಗು
೭೧. ಕಲ್ಲಿಲ್ಲದ ಬೆಟ್ಟ ಮರಳಿಲ್ಲದ ಮರುಭೂಮಿ-ಭೂಪಟ
೭೨. ಕಂದ ಬಂದ ಕೊಂದ ತಂದ-ಶ್ರೀ ರಾಮ ಚಂದ್ರ
೭೩. ಒಂದು ಹಸ್ತಕ್ಕೆ ನೂರೆಂಟು ಬೆರಳು-ಬಾಳೆಗೊನೆ
೭೪. ಚಿಣಿಮಿನಿ ಎನ್ನುವ ಕೆರೆ, ಚಿಂತಾಮಣಿ ಎನ್ನುವ ಹಕ್ಕಿ, ಕೆರೆ ಬತ್ತಿದರೆ ಹಕ್ಕಿಗೆ ಮರಣ –ದೀಪ
೭೫. ಹೋದ ನೆಂಟ, ಬಂದ ದಾರಿ ಗೊತ್ತಿಲ್ಲ-ನೆರಳು
೭೬. ನೀರಿರೋತಾವ ನಿಲ್ಲಲೇ ಕೋಣ-ಚಪ್ಪಲಿ
೭೭. ಒಂದು ಮನೆಗೆ ಒಂದೇ ತೊಲೆ-ತಲೆ
೭೮. ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ-ಗಿರಣಿ
೭೯. ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ-ದುಡ್ಡು.
೮೦. ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ-ಸಗಣಿ.
೮೧. ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ ತುಂಡುಗಳು-ಕನ್ನಡಿ
೮೨. ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ-ನೀರು
೮೩. ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ-ಬಾಳೆ ಹಣ್ಣು.
೮೪. ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ ತುಂಬ್ತದೆ ದಾಗಿನ ಅಲ್ಲ- ಗರಗಸ.
೮೫. ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.-ಬದನೆಕಾಯಿ.
೮೬. ಕಡ್ಲೆ ಕಾಳಷ್ಟು ಹಿಂಡಿ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ-ಹಲ್ಲುಪುಡಿ
೮೭. ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ-ಶ್ಯಾವಿಗೆ
೮೩. ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ-ತಂಬೂರಿ
೮೪. ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು-ಉಪ್ಪು
೮೫. ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ-ಕಪ್ಪೆ
೮೬. ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ-ಕಸಪೊರಕೆ
೮೭. ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ-ನೆರಳು
೮೮. ಮೋಟು ಗೋಡೆ ಮೇಲೆ, ದೀಪ ಉರೀತಿದೆ.- ಮೂಗುಬೊಟ್ಟು
೮೯. ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು
೯೦. ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ-ಅಕ್ಕಿ
೯೧. ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು
೯೨. ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು-ನವಿಲು.
೯೩. ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ ಒಡೆದ ನೀರು ಸಿಕ್ಕಿತು-ತೆಂಗಿನಕಾಯಿ
೯೪. ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು-ಕೋಳಿ
೯೫. ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ-ಅನ್ನದ ಅಗುಳು.
೯೬. ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.-ಸಾಬೂನು.
೯೭. ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ- ಕಲ್ಲಂಗಡಿ ಹಣ್ಣು
೯೮. ಒಂದು ರುಮಾಲು ನಮ್ಮಪ್ಪನೂ ಸುತ್ತಲಾರ-ದಾರಿ
೯೯. ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು-ಯುಗಾದಿ
೧೦೦.ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ –ಬದನೆಕಾಯಿ.
ಇತರೆ ಪ್ರಬಂಧಗಳು: