ವೀರಗಾಸೆ ಬಗ್ಗೆ ಮಾಹಿತಿ | Veeragase Information in Kannada

Veeragase Information in Kannada, ವೀರಗಾಸೆ ಕುಣಿತದ ಬಗ್ಗೆ ಮಾಹಿತಿ, veeragase history in kannada, veeragase dance information ವೀರಗಾಸೆ ಬಗ್ಗೆ ಮಾಹಿತಿ

Veeragase Information in Kannada

Veeragase Information in Kannada

ಈ ಲೇಖನಿಯಲ್ಲಿ ವೀರಗಾಸೆ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿ ನೀಡಿದ್ದೇವೆ.

ವೀರಗಾಸೆ ಶೈವ ಸಂಪ್ರದಾಯದ ಧಾರ್ಮಿಕ ವೀರನೃತ್ಯ. ಸಾಮೂಹಿಕ ನೃತ್ಯವನ್ನೊಳಗೊಂಡ ಕರ್ನಾಟಕದ ಜಾನಪದ ಕಲೆ. ಇಬ್ಬರಿಂದ ಮೂವತ್ತು ಮಂದಿ ಇದರಲ್ಲಿ ಭಾಗವಹಿಸುತ್ತಾರೆ. ಪಂಚವಾದ್ಯಗಳಾದ ತಾಳ, ಶ್ರುತಿ, ಚಮಾಳ, ಓಲಗ, ಕರಡೆ ಬಳಕೆಯಾಗುತ್ತವೆ. ಕಂಡೆಯು ಕುಣಿತದಲ್ಲಿ ಅನಿವಾರ್ಯ ವಾದ್ಯ ಎನಿಸಿದೆ.

ವೀರಗಾಸೆ ಕುಣಿತದವರ ವೇಷ-ಭೂಷಣ ವಿಶೇಷವಾಗಿರುತ್ತದೆ. ಬಿಳಿಯ ಪಂಚೆಯ ವೀರಗಚ್ಚೆ, ತಲೆಗೆ ಅರಿಶಿನ ಅಥವಾ ನೀಲಿ ಬಣ್ಣದ ರುಮಾಲು, ಕಾವಿ ಬಣ್ಣದ ಕಸೆಯಂಗಿ, ಕೊರಳಲ್ಲಿ ರುದ್ರಾಕ್ಷಿ ಸರ, ಹಣೆಗೆ ವಿಭೂತಿ, ಕರ್ಣಕುಂಡಲ, ಸೊಂಟಪಟ್ಟಿ, ಬಿಚ್ಚುಗತ್ತಿ, ಕಾಲ್ಗೆಜ್ಜೆ ಧರಿಸುತ್ತಾರೆ.

ಪೌರಾಣಿಕ ಹಿನ್ನೆಲೆ

ಈ ಕಲೆಯ ಸೃಷ್ಟಿ ಹೇಗೆ ಬಂದಿತೆನ್ನುವುದಕ್ಕೆ ಜನಪದರ ಪೌರಾಣಿಕ ಕಥೆಯಿದೆ: ತಂದೆಯ ಮಾತನ್ನು ಮೀರಿ ಪಾರ್ವತಿ ಶಿವನನ್ನು ವರಿಸುತ್ತಾಳೆ. ಇದೇ ಕಾರಣವಾಗಿ ಪಾರ್ವತಿಯ ತಂದೆ ದಕ್ಷಬ್ರಹ್ಮ ಶಿವನನ್ನು ದ್ವೇಷಿಸತೊಡಗುತ್ತಾನೆ. ಹೀಗಿರುವಾಗ ದಕ್ಷಬ್ರಹ್ಮ ಆಚರಿಸಿದ ಯಾಗಕ್ಕೆ ಶಿವನೊಬ್ಬನನ್ನು ಹೊರತುಪಡಿಸಿ ಉಳಿದೆಲ್ಲ ದೇವಾನುದೇವತೆಗಳನ್ನು ಆಹ್ವಾನಿಸುತ್ತಾನೆ. ತನ್ನ ತಂದೆ ಉದ್ದೇಶಪೂರ್ವಕವಾಗಿ ಗಂಡನನ್ನು ಅವಮಾನಿಸಿದ್ದಾನೆಂದು ಭಾವಿಸಿದ ಪಾರ್ವತಿ ಉಗ್ರಳಾಗುವಳು. ನ್ಯಾಯ ಕೇಳುವ ಸಲುವಾಗಿ ಗಂಡನ ತಡೆಯನ್ನು ಉಲ್ಲಂಘಿಸಿ ತಂದೆಯ ಬಳಿಗೆ ಬರುತ್ತಾಳೆ. ಅಳಿಯನ ಮೇಲಿನ ಕೋಪದಿಂದ ಮಗಳೆಂಬ ಮಮತೆಯನ್ನೂ ತೊರೆದು ದಕ್ಷಬ್ರಹ್ಮ ಪಾರ್ವತಿಯನ್ನು ತಿರಸ್ಕಾರದಿಂದ ನಡೆಸಿಕೊಂಡದ್ದಲ್ಲದೆ ಅವಳೆದುರಿಗೆ ಶಿವನನ್ನು ನಿಂದಿಸುತ್ತಾನೆ; ಪತಿನಿಂದೆಯನ್ನು ಸಹಿಸಲಾಗದ ಪಾರ್ವತಿ ಅಗ್ನಿಕುಂಡದಲ್ಲಿ ಬಿದ್ದು ಪ್ರಾಣಾರ್ಪಣೆ ಮಾಡಿಕೊಳ್ಳುತ್ತಾಳೆ. ಈ ದುರ್ಘಟನೆಯಿಂದ ಕುಪಿತನಾದ ಶಿವ ಉಗ್ರನಾಗಿ ತಾಂಡವ ನೃತ್ಯದಲ್ಲಿ ತೊಡಗುತ್ತಾನೆ. ಕೋಪದಿಂದ ಹಣೆಯ ಬೆವರನ್ನು ಬೆರಳುಗಳಿಂದ ಬಾಚಿ ನೆಲಕ್ಕೆ ಅಪ್ಪಳಿಸುತ್ತಾನೆ. ಆಗ ನೂರೊಂದು ಆಯುಧಗಳನ್ನು ಧರಿಸಿದ ವೀರಭದ್ರನ ಅವತಾರವಾಗುತ್ತದೆ. ಮುಂದೆ ವೀರಭದ್ರ ದಕ್ಷಬ್ರಹ್ಮನ ಯಾಗಶಾಲೆಗೆ ಬಂದು ಅದನ್ನು ಹಾಳುಗೈಯುತ್ತಾನೆ. ಹೀಗೆ ವೀರಭದ್ರ ತೋರಿದ ಪ್ರತಾಪದ ಪ್ರತೀಕವೇ ವೀರಗಾಸೆ ಕುಣಿತ ಎಂದೂ ಅಂದಿನಿಂದ ಈ ಕಲೆ ಬೆಳೆದುಬಂದಿತೆಂದೂ ಕಲಾವಿದರ ಹೇಳಿಕೆ.

ಹಬ್ಬ ಹರಿದಿನಗಳಲ್ಲಿ ಜಾತ್ರೆ ಉತ್ಸವಗಳಲ್ಲಿ, ಕಾರ್ತೀಕ ಶ್ರಾವಣ ಸೋಮವಾರಗಳಲ್ಲಿ ಕಲಾವಿದರು (ಇವರಿಗೆ ಲಿಂಗದ ವೀರರು ಎಂದು ಹೇಳುತ್ತಾರೆ) ತಪ್ಪದೆ ಕಲೆಯನ್ನು ಪ್ರದರ್ಶಿಸುತ್ತಾರೆ. ಲಿಂಗದ ವೀರರನ್ನು ಊರಿಗೆ ಕರೆಸಿ ವೀರಭದ್ರನ ಪ್ರತಾಪದ ಬಗ್ಗೆ ಖಡ್ಗ ಹೇಳಿಸಿ ಕಥೆ ಕೇಳುವುದರಿಂದ ಗ್ರಾಮಕ್ಕೆ ಒಳ್ಳೆಯದಾಗುತ್ತದೆಂದೂ ದನಕರುಗಳಿಗೆ ರೋಗರುಜಿನಗಳಿದ್ದರೆ ಅವು ನಿವಾರಣೆಯಾಗುತ್ತವೆಂದೂ ನಂಬಿಕೆಯಿದೆ.

ಕಲಾವಿದರಲ್ಲಿಯೂ ಈ ಕಲೆಯನ್ನು ಬಿಟ್ಟರೆ ತಮಗೆ ದರಿದ್ರ ಬರುತ್ತದೆ ಎಂಬ ಭಾವನೆ ಇದೆ. ಕಲಾವಿದರು ಎಷ್ಟೇ ಶ್ರೀಮಂತರಾಗಿದ್ದರೂ ಶಿವರಾತ್ರಿ, ಯುಗಾದಿ ಹಬ್ಬದಂದು ಕಾವಿ ಧರಿಸಿ ಮೂರು ಮನೆಗಾದರೂ ಕ್ವಾರಣ್ಯಕ್ಕೆ ಹೋಗಬೇಕು. ಇವರನ್ನು ವೀರಭದ್ರನ ಅವತಾರವೆಂದೇ ಭಾವಿಸಿರುವ ಗ್ರಾಮೀಣರು ಎಂದೂ ಬರಿಗೈಯಲ್ಲಿ ಕಳುಹಿಸದೆ ಭಿಕ್ಷೆ ನೀಡಿ ನಮಸ್ಕರಿಸುತ್ತಾರೆ.
ಕಲಾವಿದರ ವೇಷಭೂಷಣ ವೈಶಿಷ್ಟ್ಯಪೂರ್ಣ. ತಲೆಗೆ ಬಿಳಿಯ ಚೌಲಿಯನ್ನು ಹಾಕಿಕೊಂಡಿರುತ್ತಾರೆ. ಕಾವಿ ಅಂಗಿ, ಕಾವಿ ಕಾಸೆಪಂಚೆ, ಕಿವಿಗೆ ರುದ್ರಾಕ್ಷಿ, ಹಣೆ ಹುಬ್ಬು, ಕಿವಿಗಳಿಗೆ ವಿಭೂತಿ, ಕೊರಳು ತೋಳು ಮುಂಗೈಗಳಲ್ಲಿ ರುದ್ರಾಕ್ಷಿ ಮಾಲೆ, ನಾಗಾಭರಣ, ಎದೆಯ ಹತ್ತಿರ ವೀರಭದ್ರಸ್ವಾಮಿಯ ಹಲಗೆ- ಇಷ್ಟನ್ನು ಧರಿಸಿರುತ್ತಾರೆ. ಸೊಂಟದಲ್ಲಿ ಚೌಲಿ ಹಾಕಿದ ಹಿತ್ತಾಳೆಯ ನರಸಿಂಹ ಮತ್ತು ದಕ್ಷಬ್ರಹ್ಮನ ಶಿರಗಳನ್ನು ಕಟ್ಟಿಕೊಂಡಿರುತ್ತಾರೆ.

ಮೊಣಕಾಲಿಗೆ ಜಂಗು ಧರಿಸಿರುತ್ತಾರೆ. ಬಲಗೈಯಲ್ಲಿ ಕತ್ತಿ, ಎಡಗೈಯಲ್ಲಿ ವೀರಭದ್ರನ ಹಲಗೆಯನ್ನು ಹಿಡಿದಿರುತ್ತಾರೆ. ದೇವರ ಉತ್ಸವದ ಮುಂದೆ ಕರಡಿ ಮತ್ತು ಚಮಾಳ ವಾದ್ಯದ ಗತ್ತಿಗೆ ಲಯಬದ್ಧವಾಗಿ ಕುಣಿಯುತ್ತಾರೆ. ಕುಣಿತದ ಮಧ್ಯೆ ವೀರಭದ್ರನ ಒಡಪುಗಳನ್ನು ಹೇಳುತ್ತಾರೆ. ಜಾತ್ರೆ ಉತ್ಸವಗಳಲ್ಲಿ ಇವರು ಕೊಂಡ ಹಾಯ್ದನಂತರ, ಇವರ ಹಿಂದೆ ಕಳಸದವರು ಹಾಗೂ ಹರಕೆ ಹೊತ್ತ ಭಕ್ತರು ಹಾಯುತ್ತಾರೆ. ಶಾಸ್ತ್ರ ಪವಾಡ ನಡೆಸುವುದು ವೀರಗಾಸೆಯವರ ಮತ್ತೊಂದು ವಿಶೇಷ.

ಇತರೆ ಪ್ರಬಂಧಗಳು

ಹಬ್ಬಗಳ ಮಹತ್ವ ಪ್ರಬಂಧ

ಭಾರತೀಯ ಸಂಸ್ಕೃತಿ ಬಗ್ಗೆ ಪ್ರಬಂಧ

Leave a Comment